ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಘಟಕ ಆಯೋಜಿಸಿದ್ದ, "ಸ್ವಚ್ಛತಾ ಘೋಷವಾಕ್ಯ" ಸ್ಪರ್ಧೆಯಲ್ಲಿ ಪದ್ಮುಂಜ ಇನಿಹಾ ನೆಟ್ ಕಂಪ್ಯೂಟರ್ ಎಜುಕೇಶನ್ ಸಂಸ್ಥೆಯ ವಿದ್ಯಾರ್ಥಿನಿ "ಜಯಶ್ರೀ" ಪ್ರಥಮ ಸ್ಥಾನ ಪಡೆದಿದ್ದು, 22/06/2018 ರಂದು ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ "ಸ್ವಚ್ಛ ಗೆಳತಿ" ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಪಡೆದ ನಮ್ಮ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿನಿ "ಜಯಶ್ರೀ" ಗೆ ಅಭಿನಂದನೆಗಳು.